ಕರಾವಳಿ

ಕುಂದಾಪುರ ಉಪವಿಭಾಗಾಧಿಕಾರಿ ಅಶ್ವಥಿ ದಾವಣಗೆರೆ ಜಿಲ್ಲೆಗೆ ವರ್ಗಾವಣೆ

Pinterest LinkedIn Tumblr

ಕುಂದಾಪುರ: ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ ನಡೆಸುವ ಮೂಲಕ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಖಡಕ್ ತನವನ್ನು ತೋರಿದ್ದ ಕುಂದಾಪುರ ಉಪವಿಭಾಗಾಧಿಕಾರಿ ಅಶ್ವಥಿ ಅವರ ವರ್ಗಾವಣೆ ಆಗಿದೆ.

kundapura_assistantcommisionr_transfer

ದಾವಣೆಗೆರೆ ಜಿಲ್ಲಾಪಂಚಾಯತ್ ಸಿ‌ಇ‌ಓ ಆಗಿ ಬಡ್ತಿ ನೀಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಹನ್ನೊಂದು ತಿಂಗಳಿನಿಂದ ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ಆಗಿದ್ದ ಅಶ್ವಥಿ ಅವರು ಇತ್ತೀಚೆಗಷ್ಟೇ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಹಾಕಿಸಿದ್ದರು. ಇವರ ದಿಟ್ಟ ಕ್ರಮದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅತೀವ ಮೆಚ್ಚುಗೆಯೂ ವ್ಯಕ್ತವಾಗಿತ್ತು.

ಕುಂದಾಪುರದಲ್ಲಿ ಕೆಲಸ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲದೇ ಹನ್ನೊಂದು ತಿಂಗಳು ಕೆಲಸ ಮಾಡಿದ್ದು ಆತ್ಮತ್ರಪ್ತಿ ಇದೆ ಎಂದಿದ್ದಾರೆ. ಕುಂದಾಪುರದ ನೂತನ ಉಪವಿಭಾಗಾಧಿಕಾರಿಯಾಗಿ ಶಿಲ್ಪಾ ನಾಗ್ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

Comments are closed.