ಕರಾವಳಿ

4 ಕೋಟಿ ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳಿಗೆ ಬೈಂದೂರು ಶಾಸಕರಿಂದ ಚಾಲನೆ

Pinterest LinkedIn Tumblr

ಕುಂದಾಪುರ: ಕುಂದಾಪುರ ತಾಲೂಕಿನ ಗೋಳಿಹೊಳೆ, ಬೈಂದೂರು, ಹಳ್ಳಿಬೇರು, ಕೊಲ್ಲೂರು, ಜಡ್ಕಲ್, ಹಳ್ಳಿಹೊಳೆ, ಗುಲ್ವಾಡಿ ಗ್ರಾಮಗಳ ವಿವಿಧ ಕಾಮಗಾರಿಗಳ ಅಭಿವೃದ್ದಿ ಹಾಗೂ ಶಿಲನ್ಯಾಸ ಕಾರ್ಯಕ್ಕೆ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಚಾಲನೆ ನೀಡಿದರು.

mla_gopala-poojary_news-3 mla_gopala-poojary_news-2 mla_gopala-poojary_news-4 mla_gopala-poojary_news-1

ಬಹುತೇಕ ಕುಗ್ರಾಮಗಳನ್ನು ಕೇಂದ್ರೀಕರಿಸಿಕೊಂಡು ರಸ್ತೆ ಅಭಿವೃದ್ದಿ ಕಾಮಗಾರಿಗಳು ಕಿರು ಸೇತುವೆ ಹಾಗೂ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಸ್.ಟಿ ಕಾಲನಿಯಲ್ಲಿ ಸಮುದಾಯ ಭವನ ರಚನೆ ಮೊದಲಾದ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು. ಗುಲ್ವಾಡಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, ಬೈಂದೂರು ಕ್ಷೇತ್ರಕ್ಕೆ ದೊಡ್ಡ ಮಟ್ಟದಲ್ಲಿ ಕಾಮಗಾರಿಗಳಿಗಾಗಿ ಅನುದಾನವನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಇಂದು ಅಂದಾಜು ನಾಲ್ಕು ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಿಲನ್ಯಾಸ ಕಾರ್ಯಕ್ರಮ ಮಾಡಲಾಗಿದೆ. ಇನ್ನು ವಾರದೊಳಗಾಗಿ ಇಪ್ಪತ್ತು ಕೋಟಿ ಹಣ ಬರಲಿದೆ. ಸಿ.ಆರ್.ಎಫ್ ಅನುದಾನದಲ್ಲಿ ಸೌಡ-ಶಂಕರನಾರಾಯಣ, ನಾಡಾ-ಮೋವಾಡಿ, ಹೇರೂರು-ಆಲೂರು, ತಾರಾಪತಿ ಅಳಿವೆಕೋಡಿ- ಪಡುವರಿ, ಕುಂಜಳ್ಳಿ- ಶಾನ್ಕಟ್ ಸಂಪರ್ಕಕ್ಕೆ ಅನುಕೂಲವಾಗಲು ಸೇತುವೆಗಳ ನಿರ್ಮಾಣಕ್ಕೆ ಈಗಾಗಲೇ ಸಮ್ಮತಿ ಸಿಕ್ಕಿದ್ದು ಸದ್ಯದಲ್ಲೇ ಇದರ ಗುದ್ದಲಿ ಪೂಜೆ ಕಾರ್ಯಕ್ರಮವೂ ನಡೆಯಲಿದೆ ಎಂದರು.

Comments are closed.