ಕರಾವಳಿ

ಎಸಿಬಿ ದಾಳಿ : ಲಕ್ಷಾಂತರ ರೂ. ಅಕ್ರಮ ಹಣ ಹೊಂದಿದ್ದ ಸರ್ಕಾರಿ ಅಧಿಕಾರಿ ಬಂಧನ

Pinterest LinkedIn Tumblr

acb_raid_kottara_1

ಮಂಗಳೂರು, ಡಿಸೆಂಬರ್.1: ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಲಕ್ಷಾಂತರ ರೂ. ಅಕ್ರಮ ಹಣ ಹೊಂದಿದ್ದ ಸರ್ಕಾರಿ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ.

ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬುಧವಾರ ನಗರದ ಕೊಟ್ಟಾರದಲ್ಲಿರುವ ಕರ್ನಾಟಕ ಸರಕಾರದ ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಅಧಿಕಾರಿಯ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿದ್ದಾರೆ.

acb_raid_kottara_2 acb_raid_kottara_3 acb_raid_kottara_4 acb_raid_kottara_5 acb_raid_kottara_6

ಈ ಸಂದರ್ಭ ಲಕ್ಷಾಂತರ ರೂ. ಅಕ್ರಮ ಹಣ ಹೊಂದಿದ್ದ ಆರೋಪದಲ್ಲಿ ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಅಧಿಕಾರಿ ಎಚ್. ಸುರೇಶ್ ಎಂಬವರನ್ನು ಬಂಧಿಸಿ ಮನೆ ಹಾಗೂ ಕಚೇರಿಯಿಂದ ಲಕ್ಷಾಂತರ ರೂ. ಅಕ್ರಮ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಸುರೇಶ್ ಅವರ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿರುವ ಎಸಿಬಿ ಪೊಲೀಸರು ಕಚೇರಿಯಿಂದ 1.12 ಲಕ್ಷ ರೂ. ಮತ್ತು ಮನೆಯಿಂದ 3 ಲಕ್ಷ ರೂ. ಅಕ್ರಮ ಹಣವನ್ನು ವಶಪಡಿಸಿಕೊಂಡಿದ್ದಾರೆ

ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಇನ್‍‍ಸ್ಪೆಕ್ಟರ್ ಯೋಗೀಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಲಾಖೆಯ ಇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Comments are closed.