ಕರಾವಳಿ

ಕಾಂಗ್ರೆಸ್‌ನ ಹಿರಿಯ ನಾಯಕ ಸುರೇಶ್ ಬಲ್ಲಾಳ್ ಮುಡಾ ಅಧ್ಯಕ್ಷರಾಗಿ ನೇಮಕ

Pinterest LinkedIn Tumblr

suresh_ballal

ಮಂಗಳೂರ,ಡಿಸೆಂಬರ್.2: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ಅವರನ್ನು ನೇಮಿಸಿ ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಬಲ್ಲಾಳ್ ಅವರಿಗೆ ಸರ್ಕಾರದ ಅಧಿಕೃತ ಅದೇಶ ಇವತ್ತು ಕೈಸೇರಲಿದ್ದು, ಸೋಮವಾರ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಮುಡಾ ಅಧ್ಯಕ್ಷರ ಸ್ಥಾನಕ್ಕೆ ಬಹಳ ಪೈಪೋಟಿ ನಡೆದಿದ್ದು, ಬಹಳಷ್ಟು ಮಂದಿ ಆಕಾಂಕ್ಷಿಗಳು ಈ ಸ್ಥಾನದ ನಿರೀಕ್ಷೆಯಲ್ಲಿದ್ದರು. ಇವರಲ್ಲಿ ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಜಿಲ್ಲಾ ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ಮುಂಚೂಣಿಯಲ್ಲಿದ್ದರು. ಉಳಿದಂತೆ ನಿರ್ಗಮನ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ ಅವರು ಇನ್ನೊಂದು ಅವಧಿಗೆ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು ಎನ್ನಲಾಗಿದೆ.

ಆದರೆ ಕೆಲವು ಮಂದಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಲವು ವರ್ಷಗಳಿಂದ ಪಕ್ಷದಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿರುವ ಸುರೇಶ್ ಬಲ್ಲಾಳ್ ಅವರಿಗೆ ಯಾವೂದಾದರೂ ಸೂಕ್ತ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರನ್ನು ಬೇಟಿಯಾಗಿ ಮನವಿ ಮಾಡಿದ್ದರು ಎನ್ನಲಾಗಿದೆ.

Comments are closed.