ಮಂಗಳೂರು, ಡಿಸೆಂಬರ್. 6: ಕರ್ನಾಟಕ ರಾಜ್ಯದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ದೀಡಿರ್ ಆಗಿ ದ.ಕ.ಜಿಲ್ಲೆಯ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿದಾನಕ್ಕೆ ರಹಸ್ಯವಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ಕೋಟ್ಯಂತರ ರೂ. ವೆಚ್ಚದಲ್ಲಿ ಅದ್ದೂರಿಯಾಗಿ ಮಗಳ ವಿವಾಹ ನೆರವೇರಿಸಿ ಸುದ್ದಿಯಾಗಿದ್ದ ಜನಾರ್ದನ ರೆಡ್ಡಿಯವರ ಈ ಬೇಟಿ ಸ್ಥಳಿಯರಲ್ಲಿ ಕುತೂಹಲ ಮೂಡಿಸಿದೆ.
ಸೋಮವಾರ ತಡರಾತ್ರಿ ರಹಸ್ಯವಾಗಿ ಕಟೀಲು ಕ್ಷೇತ್ರಕ್ಕೆ ಕುಟುಂಬ ಸಮೇತ ಆಗಮಿಸಿದ್ದ ಜನಾರ್ದನ ರೆಡ್ಡಿ ಅವರು ಸ್ಥಳೀಯ ವಸತಿ ಗೃಹವೊಂದರಲ್ಲಿ ವಾಸ್ತವ್ಯವಿದ್ದ ಬಗ್ಗೆ ಮಾಹಿತಿ ಲಭಿಸಿದೆ. ಮಂಗಳವಾರ ಅವರು ಕುಟುಂಬದೊಂದಿಗೆ ಕಟೀಲು ಕ್ಷೇತ್ರದಲ್ಲಿ ಚಂಡಿಕಾ ಯಾಗ ನಡೆಸಿರುವ ಬಗ್ಗೆ ನಂಬಲರ್ಹ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Comments are closed.