ಕರಾವಳಿ

ಬಾಳಿಗ ಕುಟುಂಬದಿಂದ ಜಾಮೀನು ರದ್ದತಿ ಕೋರಿ ಅರ್ಜಿ : ನರೇಶ್ ಶೆಣೈಗೆ ಸುಪ್ರೀಂ ಕೋಟ್ ನೋಟಿಸ್ ಜಾರಿ

Pinterest LinkedIn Tumblr

Baliga_murder_naresh

ಮಂಗಳೂರು, ಡಿಸೆಂಬರ್.17: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಾಂದುರಂಗ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸುಪ್ರೀಂ ಕೋಟ್ ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದೆ.

ಬಾಳಿಗಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಸುಪ್ರೀಂ ಕೋಟ್ ಡಸ್ಟಿ ಸರ್ವೀಸ್ ನೋಟಿಸ್ ಜಾರಿಗೊಳಿಸಿದ್ದು, ಅದರ ಪ್ರತಿಯನ್ನು ಇಂದು ನರೇಶ್ ಶೆಣೈಗೆ ಕಳಿಸಲಾಗಿದೆ.

ನರೇಶ್ ಶೆಣೈಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ವಿನಾಯಕ ಬಾಳಿಗಾ ಅವರ ತಂದೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಜಾಮೀನು ರದ್ದತಿ ಕುರಿತಂತೆ ಸುಪ್ರೀಂ ಕೋರ್ಟ್ ಡಸ್ಟಿ ಸರ್ವೀಸ್ ನೋಟಿಸ್ ಜಾರಿಗೊಳಿಸಿದ್ದು, ಅದರ ಪ್ರತಿಯನ್ನು ಬಾಳಿಗಾ ಕುಟುಂಬವು ಇಂದು ಪೊಲೀಸ್ ರಕ್ಷಣೆಯಲ್ಲಿ ನರೇಶ್ ಶೆಣೈ ಮಾಲಕತ್ವದ ವಿವೇಕ್ ಟ್ರೇಡರ್ಸ್ನಲ್ಲಿ ಜಾರಿ ಪ್ರಕ್ರಿಯೆ ನಡೆಸಿತು.

2016ರ ಮಾರ್ಚ್ 21ರಂದು ಮಂಗಳೂರು ನಗರದ ಬೆಸೆಂಟ್ ಕಾಲೇಜಿನ ಸಮೀಪ, ಪಿ.ವಿ.ಎಸ್.ಕಲಾಕುಂಜದ ಎದುರಿನ ಓಣಿಯೊಂದರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ಅವರ ನಿವಾಸದ ಎದುರೆ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಅಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ಬೆಳಿಗ್ಗೆ 05-45 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ಹೋಂಡಾ ಪ್ಲೆಸರ್ ಕೆ.ಎ.19.ಇ.ಡಿ 3098 ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್ ನಲ್ಲಿ ಪರಾರಿಯಾಗಿದ್ದರು. ಈ ಕೊಲೆಯ ಪ್ರಮುಖ ಆರೋಪಿಯಾಗಿ ನಮೋ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ ವಿರುದ್ಧ ಕೇಸು ದಾಖಲಿಸಲ್ಪಟ್ಟಿತ್ತು.

Comments are closed.