ಮಂಗಳೂರು,ಡಿಸೆಂಬರ್.18: ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಹಾಗೂ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಶ್ರಯದಲ್ಲಿ ಬಾನುವಾರ ನಗರದ ಸ್ಕೌಟ್ ಭವನದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಸಾಧನೆ ಮಾಡುತ್ತಿರುವ ಕುಂದಾಪುರದ ಮದರ್ ಥೆರೆಸಾ ಪದವಿಪೂರ್ವ ಕಾಲೇಜಿನ ಕುಮಾರಿ ರೆನಿಟಾ ಲೊಬೊ ಹಾಗೂ ಕಡಬದ ಏಮ್ಸ್ ಕಾಲೇಜಿನ ಸಮೀರಾ ಹಾಗೂ ಫೌಝಿಯಾ ಬಿ.ಎಸ್ ರನ್ನು ಈ ವರ್ಷದ ಪ್ರೆಸ್ ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಅರಣ್ಯ ,ಪರಿಸರ ,ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಇಂದು ಪ್ರಶಸ್ತಿ ಪ್ರದಾನ ಮಾಡಿದರು.
ಪ್ರೆಸ್ ಕ್ಲಬ್ ಅಧ್ಯಕ್ಷರಾದ ರೋನಾಲ್ಡ್ ಅನಿಲ್ ಫೆರ್ನಾಂಡೀಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪತ್ರಕರ್ತರ ಬಳಗದಿಂದ ಹಿರಿಯ ಯಕ್ಷಗಾನ ಕಲಾವಿದರ ಮಾರ್ಗದರ್ಶನದಲ್ಲಿ ಯಕ್ಷಗಾನ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಮೊಹಿಯುದ್ದೀನ್ ಬಾವ ಹಾಗೂ ದ.ಕ.ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಅತಿಥಿಗಳಾಗಿದ್ದರು.
ವೇದಿಕೆಯಲ್ಲಿ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು.
ಪ್ರೆಸ್ ಕ್ಲಬ್ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ, ಪತ್ರಿಕಾಭವನ ಟ್ರಸ್ಟ್ನ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ ಹಾಗೂ ಅರೀಫ್ ಪಡುಬಿದ್ರೆ , ಆತ್ಮಭೂಷಣ್ ಭಟ್, ನರೇಶ್ ವಿವಿಧ ಕಾರ್ಯಕ್ರಮ ನಿರೂಪಿಸಿದರು.
Comments are closed.