ಕರಾವಳಿ

ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಭಾವಚಿತ್ರ ವಿರೂಪ: ಕೇಸು ದಾಖಲು

Pinterest LinkedIn Tumblr

ಕುಂದಾಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಬ್ಯಾನರ್ ವಿರೂಪಗೊಳಿಸಿದ ಕಿಡಿಗೇಡಿಗಳ ಪತ್ತೆಹಚ್ಚಿ ಕಾನೂನು ಕ್ರಮಕೈಗೊಳ್ಳುವಂತೆ ಕೋಟ ಪೊಲೀಸರಿಗೆ ದೂರು ನೀಡಲಾಗಿದೆ.

kundapura_molahalli_crime-1 kundapura_molahalli_crime-2

ಇತ್ತೀಚೆಗೆ ಕುಂದಾಪುರ ತಾಲೂಕಿನ ಮೊಳಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ದಲಿತ ಜಾಗೃತಿ ಸಮಾವೇಶದ ಉದ್ಘಾಟನೆ ಪ್ರಯುಕ್ತ ಪ್ರಚಾರಕ್ಕಾಗಿ ಸ್ಥಳಿಯ ಪಂಚಾಯತ್‌ ಪರವಾನಿಗೆ ಪಡೆದು ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆ ಸರ್ಕಲ್‌ನಲ್ಲಿ 8*5 ಅಳತೆಯ ಅಂಬೇಡ್ಕರ್‌ರವರ ಭಾವಚಿತ್ರವಿರುವ ಫ್ಲೆಕ್ಸ್ ಬ್ಯಾನರನ್ನು ಅಳವಡಿಸಿದ್ದು ರಾತ್ರೋರಾತ್ರಿ ಕಿಡಿಗೇಡಿಗಳು ಆ ಬ್ಯಾನರ್ ಹರಿದು ಹಾಕಿ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್‌ರವರ ಭಾವಚಿತ್ರವನ್ನು ವಿರೂಪಗೊಳಿಸಿದ್ದಾರೆ. ಈ ಬಗ್ಗೆ ಕೊಟ ಪೊಲೀಸ್‌ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದ್ದು ಕಿಡಿಗೇಡಿಗಳ ಪತ್ತೆಗಾಗಿ ಬಲೆಬೀಸಲಾಗಿದೆ.

Comments are closed.