ಉಡುಪಿ: ಮಕ್ಕಳಿಲ್ಲದ ಕೊರಗಿನಲ್ಲಿ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಎಂಬಲ್ಲಿ ವರದಿಯಾಗಿದೆ. ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದಲ್ಲಿ ಈ ದುರ್ಘಟನೆನಡೆದಿದ್ದು ಇಲ್ಲಿನ ನಿವಾಸಿಗಳಾದ ಸೀತಾರಾಮ ಆಚಾರ್ಯ, ಸುನಂದಾ ಮೃತ ದಂಪತಿಗಳು.
ಘಟನೆ ವಿವರ: ಮದುವೆಯಾಗಿ ಹಲವು ವರ್ಷಗಳು ಕಳೆದರೂ ಕೂಡ ಮಕ್ಕಳಿಲ್ಲವೆಂಬ ಕೊರಗು ಈ ದಂಪತಿಯನ್ನು ಕಾಡುತ್ತಿದ್ದು ಈ ಬಗ್ಗೆ ಮಾನಸಿಕವಗಿ ಇಬ್ಬರು ಕುಗ್ಗಿದ್ದರು ಎನ್ನಲಾಗಿದೆ. ಇದೇ ವಿಚಾರದಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಶಂಕೆ ವ್ಯಕ್ತವಾಗಿದ್ದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ಶನಿವಾರ ಈ ಘಟನೆ ಬೆಳಕಿಗೆ ಬಂದಿದೆ. ನಿರ್ಜನ ಪ್ರದೇಶದಲ್ಲಿರುವ ಮನೆಯಾದ ಕಾರಣ ಈ ವಿಚರ ತಡವಾಗಿ ಬೆಳಕಿಗೆ ಬಂದಿದೆ.
ಈ ಬಗ್ಗೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.