ಉಡುಪಿ: ಡಿವೈಡರ್ಗೆ ಚಲಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿಯ ಕರಾವಳಿ ಬೈಪಾಸ್ ಬಳಿಯ ಶಾರದಾ ಹೊಟೇಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದೆ.
ಮಣಿಪಾಲ ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾಗಿರುವ ಆಂಧ್ರ ಮೂಲದ ಪವನ್ ಕುಮಾರ್ ರಾಘವನ್(22) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಹಿಂಬದಿ ಸವಾರರಾಗಿದ್ದ ಅಹ್ಮದಾಬಾದ್ ಮೂಲದ ಸಾಕ್ಷಿ ಮಹೇಶ್ವರಿ ಎನ್ನುವವರಿಗೆ ಗಂಭೀರವಾಗಿ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ
ಗುರುವಾರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಬೈಕ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ರಸ್ತೆಯಿಂದ ೨೦೦ ಮೀಟರ್ ಬೈಕ್ ಎಸೆಯಲ್ಪಟ್ಟಿದ್ದರಿಂದ ಯಾರಿಗೂ ಅಪಘಾತ ನಡೆದಿರುವುದು ಬೆಳಕಿಗೆ ಬಂದಿರಲಿಲ್ಲ. ಬೆಳಿಗ್ಗೆನ ಜಾವ ಘಟನೆ ಬೆಳಕಿಗೆ ಬಂದಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸಾಕ್ಷಿಯವರನ್ನು ಸಾರ್ವಜನಿಕರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.
Comments are closed.