ಮಂಗಳೂರು: ಮಂಗಳೂರಿನ ಹಳೆ ಬಂದರ್ ನಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಚೂರಿ ಇರಿತಕ್ಕೊಳಗಾಗಿರುವ ವ್ಯಕ್ತಿಯನ್ನು ನಗರದ ಮೀನು ವ್ಯಾಪಾರಿ ಪಾಂಡೇಶ್ವರ ಸಮೀಪದ ಸುಭಾಷ್ ನಗರ ನಿವಾಸಿ ಸಲೀಂ (42) ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ 5.30 ರ ಸುಮಾರಿಗೆ ಸಲೀಂ ಅವರು ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಹಳೆ ಬಂದರ್ ಸಮೀಪ ಮೂರು ಜನರಿದ್ದ ತಂಡವೊಂದು ಸಲೀಂ ಅವರ ಬೈಕ್ ಅಡ್ಡಗಟ್ಟಿ ಚೂರಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ಸಲೀಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈಯಕ್ತಿಕ ದ್ವೇಷದಿಂದ ಈ ಘಟನೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸಲೀಂ ಅವರನ್ನು ದರೋಡೆ ಮಾಡುವ ಉದ್ದೇಶದಿಂದ ಈ ಹಲ್ಲೆ ನಡೆದಿರ ಬಹುದೇ ಎಂಬ ಬಗ್ಗೆ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Comments are closed.