ಮಂಗಳೂರು: ಡಿಸೆಂಬರ್ 30ರಂದು ರಾತ್ರಿ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಶನಿವಾರ ಬೆಳಿಗ್ಗೆ ಮಸ್ಕತ್ನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಬಗ್ಗೆ ವರದಿಯಾಗಿದೆ.
ಏರ್ ಇಂಡಿಯಾ ವಿಮಾನ ನಿನ್ನೆ ರಾತ್ರಿ 11:30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಬೆಳಗ್ಗೆ ಮೋಡ ಕವಿದ ವಾತಾವರಣದಿಂದ ಅನಿವಾರ್ಯವಾಗಿ ಪಥ ಬದಲಿಸಿದ ವಿಮಾನ 9:30ಕ್ಕೆ ಮಸ್ಕತ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಎಲ್ಲರಿಗೂ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.