ಉಪ್ಪಳ, ಜ.4: ಸ್ವಿಫ್ಟ್ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಮಂಗಳೂರು-ಕಾಸರಗೋಡ್ ರಾಷ್ಟ್ರೀಯ ಹೆದ್ದಾರಿ 44ರ ಉಪ್ಪಳ ನಯಾಬಝಾರ್ ಬಳಿ ನಡೆದಿದೆ.
ಮೃತರನ್ನು ತೃಶೂರ್ ಚೇಳಕ್ಕರ ನಿವಾಸಿ ಡಾ.ರಾಮನಾರಾಯಣ ಸಿ.ಕೆ (52), ಪತ್ನಿ ವತ್ಸಲಾ (48),ಪುತ್ರ ರಂಜಿತ್(20) ಹಾಗೂ ಗೆಳೆಯ ನಿತಿನ್(20) ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ ಸುಮಾರು ನಾಲ್ಕು ಗಂಟೆಯ ಸಮಯ ಮಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಟ್ರಕ್ ಮುಂದಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.