ಕರಾವಳಿ

ಮಂಗಳೂರು ಮ್ಯಾರಥಾನ್-2017 : ಜಿಲ್ಲಾಧಿಕಾರಿಗಳಿಂದ ಮಾಹಿತಿ ಪತ್ರ ಬಿಡುಗಡೆ

Pinterest LinkedIn Tumblr

ಮಂಗಳೂರು, ಜ.5: ನಿಟ್ಟೆ ಸಂಸ್ಥೆಯ ವತಿಯಿಂದ ದ.ಕ. ಅಥ್ಲೆಟಿಕ್ಸ್ ಅಸೋಸಿಯೇಶನ್ನ ಸಹಕಾರದೊಂದಿಗೆ ಫೆ.19ರಂದು ‘ನಿಟ್ಟೆ ಮಂಗಳೂರು ಮ್ಯಾರಥಾನ್-2017’ ನಡೆಯಲಿದೆ.

ಬುಧವಾರ ನಗರದ ಪ್ರತಿಷ್ಠಿತ ಹೊಟೇಲ್ ಓಷಿಯನ್ ಪರ್ಲ್‌ನಲ್ಲಿ ನಿಟ್ಟೆ ಯುನಿವರ್ಸಿಟಿಯ ಕುಲಪತಿ ಹಾಗೂ ನಿಟ್ಟೆ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಎನ್.ವಿನಯ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ದ.ಕ.ಜಿಲ್ಲಾ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ಜಿ. ಅವರು ನಿಟ್ಟೆ ಮಂಗಳೂರು ಮ್ಯಾರಥಾನ್-2017’ರ ಮಾಹಿತಿ ಪತ್ರವನ್ನು ಬಿಡುಗಡೆಗೊಳಿಸಿದರು.

ಸಮಾರಂಭದಲ್ಲಿ ನಿಟ್ಟೆ ಯುನಿವರ್ಸಿಟಿಯ ಸಹ ಕುಲಪತಿ ವಿಶಾಲ್ ಹೆಗ್ಡೆ, ದ.ಕ. ಅಥ್ಲೆಟಿಕ್ಸ್ ಅಸೋಸಿಯೇಶನ್ನ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ, ಕಾರ್ಯದರ್ಶಿ ತಾರನಾಥ ಶೆಟ್ಟಿ, ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿರುವ ಇಬ್ಬರು ಕ್ರೀಡಾಪಟುಗಳಾದ ಶ್ರೀಧರ ಆಳ್ವ ಮತ್ತು ಅನಿಲ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Comments are closed.