ಕರಾವಳಿ

ರಸ್ತೆ ಅಪಘಾತದಲ್ಲಿ ಅಯ್ಯಪ್ಪ ವ್ರತಧಾರಿ ಛಾಯಾಚಿತ್ರಗ್ರಾಹಕ ಮೃತ್ಯು

Pinterest LinkedIn Tumblr

ಧರ್ಮಸ್ಥಳ, ಜನವರಿ.6 : ಪಿಕಪ್ ವಾಹನವೊಂದು ಢಿಕ್ಕಿ ಹೊಡೆದು ಬೈಕ್ ಸವಾರ ಅಯ್ಯಪ್ಪ ವ್ರತಧಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಕ್ಕಡದ ಉಪ್ಪಾರಪಳಿಕೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ದುರ್ಘಟನೆಯಲ್ಲಿ ಮೃತಪಟ್ಟ ಬೈಕ್ ಸವಾರನನ್ನು ವಿಟ್ಲ ನಿವಾಸಿ ಛಾಯಾಚಿತ್ರಗ್ರಾಹಕ ಧನಂಜಯ್ (34) ಎಂದು ಗುರುತಿಸಲಾಗಿದೆ.

ಇವರು ವಿಟ್ಲದಲ್ಲಿರುವ ತಮ್ಮ ಪತ್ನಿಯ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಹಾಗೂ ಮಗುವನ್ನು ಅಗಲಿದ್ದಾರೆ.

ಬೆಳ್ತಂಗಡಿಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments are closed.