ಕರಾವಳಿ

ಪಶ್ಚಿಮ ವಲಯದ ನೂತನ ಐಜಿಪಿ ಪಿ.ಹರಿಶೇಖರನ್ ಅಧಿಕಾರ ಸ್ವೀಕಾರ

Pinterest LinkedIn Tumblr

ಮಂಗಳೂರು, ಜನವರಿ.6: ದ.ಕ. ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ವಲಯದ ನೂತನ ಐಜಿಪಿ (ಪೊಲೀಸ್ ಮಹಾನಿರೀಕ್ಷಕ) ಯಾಗಿ ನಿಯುಕ್ತಿಗೊಂಡ ಪಿ.ಹರಿಶೇಖರನ್ ಅವರು ಶುಕ್ರವಾರ ಮಂಗಳೂರಿನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಮಂಗಳೂರು ಪಶ್ಚಿಮ ವಲಯ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜೆ.ಅರುಣ್ ಚಕ್ರವರ್ತಿಯವರನ್ನು ಬೆಂಗಳೂರಿನ ಆಂತ ರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ (ಪೂರ್ವ ವಲಯ) ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ, ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಹರಿಶೇಖರನ್ ಅವರನ್ನು ಇಲ್ಲಿಗೆ ವರ್ಗಾಯಿಸಲಾಗಿತ್ತು.

ಶುಕ್ರವಾರ ಮಂಗಳೂರಿನ ಕಚೇರಿಯಲ್ಲಿ ಏರ್ಪಡಿಸಲಾದ ಸರಳ ಸಮಾರಂಭದಲ್ಲಿ ಜೆ.ಅರುಣ್ ಚಕ್ರವರ್ತಿಯವರು ಹರಿಶೇಖರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.