ಮಂಗಳೂರು, ಜನವರಿ.23: ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕವಾಗಿದ್ದ ರವೀಂದ್ರನಾಥ ಕಾಮತ್ ನೇಮಕಾತಿಗೆ ತಡೆಯಾಜ್ಞೆ ನೀಡಿದೆ.
ಮಾನ್ಯ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾಗಿರುವ ಆನಂದ ಬೈರಾರೆಡ್ಡಿಯವರು ಸರಕಾರದ ನೇಮಕಾತಿಗೆ ತಡೆಯಾಜ್ಞೆ ನೀಡಿದ್ದಾರೆ.
ರವೀಂದ್ರನಾಥ ಕಾಮತ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ಸರಕಾರ ನೇಮಿಸಿದ್ದನ್ನು ಪ್ರಶ್ನಿಸಿ ವಕೀಲ ಅರುಣ್ ಶ್ಯಾಮ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ನೇಮಕಾತಿಗೆ ತಡೆಯಾಜ್ಞೆ ನೀಡಿದ್ದಾರೆ.
Comments are closed.