ಕರಾವಳಿ

ಸ್ವಚ್ಛತೆಗಾಗಿ ಅಭಿಯಾನ ನಡೆಸುವ ಪರಿಸ್ಥಿತಿ ಬಂದಿರುವುದು ಖೇದಕರ : ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ವಿಷಾದ

Pinterest LinkedIn Tumblr

ಮಂಗಳೂರು, ಫೆಬ್ರವರಿ.12: ಸ್ವಚ್ಛತೆ ಕಾಪಾಡುವುದು ನಮ್ಮ ಜವಾಬ್ದಾರಿ. ಆದರೆ ಇಂದು ಸ್ವಚ್ಛತೆಗಾಗಿ ಅಭಿಯಾನ ನಡೆಸುವ ಪರಿಸ್ಥಿತಿ ಬಂದಿರುವುದು ಖೇದಕರ ಎಂದು ಖ್ಯಾತ ಬಾಲಿವುಡ್ ನಟ ಹಾಗೂ ಸಮಾಜ ಸೇವಕರ್ತ ನಾನಾ ಪಾಟೇಕರ್ ಹೇಳಿದರು.

ರಾಮಕೃಷ್ಣ ಮಠದ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್ ಜಾಗೃತಿ ಜಾಥಾಕ್ಕೆ ರವಿವಾರ ಬೆಳಿಗ್ಗೆ ಅವರು ಚಾಲನೆ ನೀಡಿದರು. ಹಂಪನಕಟ್ಟೆಯ ವಿವಿ ಕಾಲೇಜು ಸಮೀಪದ ರಸ್ತೆ ಬದಿಯ ಕಂಪೌಂಡ್ ಗೋಡೆಯಲ್ಲಿ ಮನುಷ್ಯನ ಚಿತ್ರಕ್ಕೆ ಬಣ್ಣ ತುಂಬುವ ಮೂಲಕ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಳಿಕ ಸ್ವಚ್ಛ ಭಾರತ್ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡ ನಟ ಪಾಟೇಕರ್ ರಾಮಕೃಷ್ಣ ಮಠದ ಸ್ವಾಮೀಜಿಗಳೊಂದಿಗೆಹೆಜ್ಜೆ ಹಾಕಿದರು. ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ, ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಆರ್.ಎಸ್.ಎಸ್.ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ವಿವಿಧ ಗಣ್ಯರು ಹಾಗೂ ನಗರದ ಕಾಲೇಜು ವಿದ್ಯಾರ್ಥಿಗಳು ಸ್ವಚ್ಛತಾ ಜಾಥದಲ್ಲಿ ಪಾಲ್ಗೊಂಡಿದ್ದರು.

Comments are closed.