ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಮೂರು ಕರುಗಳನ್ನು ರಕ್ಷಿಸಿದ ಘಟನೆ ಉಡುಪಿಯ ಕಾಪುವಿನ ಮೂಳೂರು ಎಂಬಲ್ಲಿ ನಡೆದಿದೆ.
ಮೂಳೂರಿನ ಅಬ್ದುಲ್ ಖಾದರ್ ಮನೆ ಪಕ್ಕದ ಶೆಡ್ ಅಕ್ರಮ ಕಸಾಯಿಖಾನೆಯ ಅಡ್ಡೆಯಾಗಿತ್ತು. ಕಾಪು ಪಿಎಸ್ಐ ನಿತ್ಯಾನಂದ ಗೌಡ ನೇತ್ರತ್ವ ಈ ಕಾರ್ಯಾಚರಣೆ ನಡೆದಿದ್ದು ದಾಳಿ ವೇಳೆ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ದೊರೆತ ದನದ ಚರ್ಮಗಳು, ಆಯುಧ ಮೊದಲಾದವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಲ್ಲದೇ ಮಾಂಸ ಮಾಡಲು ಕಟ್ಟಿ ಹಾಕಿದ್ದ ಮೂರು ಕರುಗಳನ್ನು ರಕ್ಷಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.