ಕರಾವಳಿ

ನವೆಂಬರ್ 8ರಂದು ಕಾಂಗ್ರೆಸ್‌ನಿಂದ ಕರಾಳ ದಿನಾಚರಣೆ

Pinterest LinkedIn Tumblr

ಮಂಗಳೂರು : ಕೇಂದ್ರ ಸರಕಾರವು ನೋಟನ್ನು ಅಮಾನ್ಯಗೊಳಿಸಿದ ದಿನವಾದ ನ.8ರಂದು ಕರಾಳ ದಿನಾಚರಣೆ ನಡೆಸಲು ಕಾಂಗ್ರೆಸ್ ಸಿದ್ದತೆ ನಡೆಸಿದೆ.

ಈ ಬಗ್ಗೆ ಶುಕ್ರವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು, ಕೇಂದ್ರ ಸರಕಾರವು ಕಳೆದ ವರ್ಷದ ನ.8ರಂದು ನೋಟನ್ನು ಅಮಾನ್ಯಗೊಳಿಸಿದೆ.

ಇದರಿಂದ ಕೋಟ್ಯಂತರ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಪಕ್ಷವು ಅಂದು ಕರಾಳ ದಿನಾಚರಣೆಯನ್ನು ನಡೆಸಲಿದೆ. ಇದೇ ವೇಳೆ ಜಿಲ್ಲೆಯ ವಿವಿಧ ಕಡೆ ಪ್ರತಿಭಟನಾ ಸಭೆಯನ್ನು ನಡೆಸಲಾಗುವುದು ಎಂದು ಹೇಳಿದರು.

ಈ ವೇಳೆ ಮಂಗಳೂರು ಮೇಯರ್ ಕವಿತಾ ಸನಿಲ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಕ್ಷದ ಪ್ರಮುಖರಾದ ನವೀನ್ ಡಿಸೋಜ, ಸಂತೋಷ್ ಕುಮಾರ್ ಶೆಟ್ಟಿ, ನಝೀರ್ ಬಜಾಲ್, ಪ್ರವೀಣ್ ಚಂದ್ರ ಆಳ್ವ ಹಾಗೂ ಆರೀಫ್ ಉಪಸ್ಥಿತರಿದ್ದರು.

Comments are closed.