ಮಂಗಳೂರು, ನವೆಂಬರ್. 6: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ಕ್ರಾಸ್ ರಸ್ತೆ ಸಮೀಪದ ಜೆ.ಬಿ.ಲೋಬೊ ತಿರುವು ರಸ್ತೆಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರು ಮಂದಿಯನ್ನು ಮಂಗಳೂರು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಹಾಗೂ ಉರ್ವಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೇರಳ ಕೋಜಿಕ್ಕೋಡ್ನ ಆಮಿಮ್ (23) ಕೇರಳ ಮೂಲದ ಶಮೀಲ್ (24), ಶಭೀತ್ (23), ಮಲಪ್ಪುರಂನ ಶಬೀರ್ (26), ಕೇರಳ ಕುರುವಾಯುರುನ ಅನ್ಸಾರ್ (26), ಕೇರಳ ಜಂಗನೂರುನ ಸೂರಜ್ (20) ಎಂದು ಗುರುತಿಸಲಾಗಿದೆ.
ಬಂಧಿತ ವ್ಯಕ್ತಿಗಳು ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಲಭಿಸಿದ ಮೇರೆಗೆ ದಾಳಿ ನಡೆಸಿದ ಮಂಗಳೂರು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಹಾಗೂ ಉರ್ವಠಾಣಾ ಪೊಲೀಸರು ಗಾಂಜಾ ಸೇವನೆ ಮಾಡುತ್ತಿದ್ದ ಯುವಕರನ್ನು ರೆಡ್ಹ್ಯಾಂಡಾಗಿ ಬಂಧಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಹಾಗೂ ಕೇಂದ್ರ ಉಪವಿಭಾಗ ಎಸಿಪಿ ಉದಯ ನಾಯಕ್ ಮಾರ್ಗದರ್ಶನದಲ್ಲಿ ರೌಡಿ ನಿಗ್ರಹದಳದ ಪೊಲೀಸ್ ನಿರೀಕ್ಷಕ ರವೀಶ್ ಎಸ್. ನಾಯಕ್, ಪಿಎಸ್ಐ ಕೃಷ್ಣ ಬಿ., ಎಎಸ್ಐಗಳಾದ ದಾಮೋದರ್, ಬಾಲಕೃಷ್ಣ, ಎಚ್ಸಿಗಳಾದ ಸಂತೋಷ್ ಕುಮಾರ್ ಸಸಿಹಿತ್ಲು, ಸಿದ್ಧಾರ್ಥ್, ಸಂತೋಷ್ ಕುಮಾರ್, ಕರುಣೇಶ್ ಕುಮಾರ್, ಲೋಕೇಶ್, ಪಿಸಿಗಳಾದ ಪ್ರಮೋದ್, ವಿನೋದ್, ಯೋಗೀಶ್, ಕಾಂತರಾಜು, ಹೇಮಂತ್ ಕುಮಾರ್, ಶಂಕರಪ್ಪ ಲಮಾಣಿ ಮುಂತಾದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Comments are closed.