ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಆರಂಭ

Pinterest LinkedIn Tumblr

ಮಂಗಳೂರು, ನವೆಂಬರ್ 14 : ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನಿಗೆ ಅತಿ ಪ್ರಿಯವಾದ ಲಕ್ಷ ದೀಪೋತ್ಸವಕ್ಕೆ ಚಾಲನೆ ದೊರೆತಿದ್ದು, ಶ್ರೀಮಂಜುನಾಥ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಆರಂಭವಾಗಿದೆ.

ಐದು ದಿನಗಳ ಕಾಲ ಅದ್ಧೂರಿಯಾಗಿ ದೀಪೋತ್ಸವ ನಡೆಯಲಿದ್ದು, ಶ್ರೀ ಕ್ಷೇತ್ರ ಸೇರಿದಂತೆ ಸುತ್ತಮುತ್ತಲ ಪರಿಸರವೆಲ್ಲ ಬಣ್ಣ-ಬಣ್ಣದಿಂದ ಕಂಗೊಳಿಸುತ್ತಿದೆ.ದೀಪಗಳಿಂದ ಪರಮ ಪವಿತ್ರ ಧರ್ಮಸ್ಥಳ ಕ್ಷೇತ್ರ ಝಗಮಗಿಸುತ್ತಿದ್ದು, ಭಕ್ತರ ಪಾಲಿಗೆ ದೀಪ ಅಲಂಕಾರವನ್ನು ನೋಡೋದೆ ಕಣ್ಣಿಗೆ ಹಬ್ಬವಾಗಿದೆ.

ಮಂಜುನಾಥನಿಗೆ ಅತಿ ಪ್ರಿಯವಾದ ಈ ದೀಪೋತ್ಸವಕ್ಕೆ ಹಿಂದೆ ಮಂಜುನಾಥನ ಸನ್ನಿದಿಯ ಸುತ್ತಲೂ ಒಂದು ಲಕ್ಷ ದೀಪಗಳನ್ನು (ಹಣತೆಗಳನ್ನು) ಉರಿಸುತ್ತಿದ್ದರು.ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು ಶೃಂಗರಿಸಲಾಗಿದೆ.

ದೀಪೋತ್ಸವದ ಪ್ರಯುಕ್ತ ಬೆಳ್ಳಿಯ ಬ್ರಹ್ಮರಥೋತ್ಸವವೂ ನಡೆಯಲಿದೆ. ದೇಶ ವಿದೇಶದಿಂದ ಆಗಮಿಸಿದ ಲಕ್ಷಾಂತರ ಮಂದಿ ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಲಿದೆ.

ಶ್ರೀ ಕ್ಷೇತ್ರದಲ್ಲಿ ಎಲ್ಲಾ ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುತ್ತದೆ. ಲಕ್ಷದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ.

Comments are closed.