ಮಂಗಳೂರು, ನವೆಂಬರ್. 18: ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತ ಪಟ್ಟ ಘಟನೆ ಇಂದು ಬೆಳಿಗ್ಗೆ ಉಳ್ಳಾಲ ಸಮೀಪದ ಕುಂಪಲ ಬೈಪಾಸ್ನಲ್ಲಿ ಸಂಭವಿಸಿದೆ.
ಮೃತ ಮಹಿಳೆಯನ್ನು ಕುಂಪಲ ವಿದ್ಯಾನಗರ ನಿವಾಸಿ ಸುಧೀರ್ ಎಂಬವರ ಪತ್ನಿ ನಿಶಾ (31) ಎಂದು ಗುರುತಿಸಲಾಗಿದೆ.
ಮಂಗಳೂರಿನ ಹಾರ್ಡ್ವೇರ್ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ನಿಶಾ ಅವರು ಎಂದಿನಂತೆ ಇಂದು ಬೆಳಿಗ್ಗೆ ಉಳ್ಳಾಲ ಸಮೀಪದ ಕುಂಪಲ ಬೈಪಾಸ್ ಬಳಿ ಮಂಗಳೂರಿಗೆ ತೆರಳುವ ಬಸ್ಸಿಗಾಗಿ ರಸ್ತೆ ದಾಟುತ್ತಿದ್ದಾಗ ಕೇರಳ ಕಡೆಯಿಂದ ವೇಗವಾಗಿ ಬಂದ ಮಾರುತಿ ಓಮಿನಿ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ನಿಶಾ ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
Comments are closed.