ಕಾರವಾರ: ಸ್ಕೂಟಿ ಹಾಗೂ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶುಕ್ರವಾರ ಸಂಭವಿಸಿದೆ.
ಮುರುಡೇಶ್ವರ ಪೊಲೀಸ್ ಠಾಣೆಯ ಮಹಿಳಾ ಪೇದೆ ಮೃದುಲಾ ಆಚಾರ್ (32) ಮೃತರು.
ಮುರುಡೇಶ್ವರ ದೇವಸ್ಥಾನದ ಮುಖ್ಯ ದ್ವಾರದ ಹತ್ತಿರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆದ್ದಾರಿ ಅಗಲೀಕರಣದ ತೆರವು ಕಾರ್ಯಾಚರಣೆಯಲ್ಲಿ ನೆರವಾಗಲು ಮೃದುಲಾ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ರಸ್ತೆಯನ್ನು ದಾಟುತ್ತಿದ್ದ ವೇಳೆ ಭಟ್ಕಳ ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೃದುಲಾ ಮೃತಪಟ್ಟಿದ್ದಾರೆ.
ಈ ಬಗ್ಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.