ಮಂಗಳೂರು, ನವೆಂಬರ್. 21: ಇದೇ ಮೊದಲ ಭಾರಿಗೆ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರು ಮಂಗಳೂರುಗೆ ಆಗಮಿಸಿದರು.
ಇಂದು ಬೆಳಿಗ್ಗೆ ತನ್ನ ಪತ್ನಿಯೊಂದಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರು ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ವಿಶ್ರಾಂತಿ ಪಡೆದು ಬಳಿಕ ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಂದಾಪುರ ತಾಲೂಕಿನ ಕೊಲ್ಲೂರಿಗೆ ತೆರಳಿದರು.
ಶ್ರೀಲಂಕಾ ಭದ್ರತಾ ಪಡೆ ಹಾಗು ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
Comments are closed.