ಕರಾವಳಿ

ಮಂಗಳೂರಿನಲ್ಲಿ “ರಾಜಸ್ಥಾನ ಗ್ರಾಮೀಣ ಮೇಳ” ಆರಂಭ

Pinterest LinkedIn Tumblr

ಮಂಗಳೂರು, ನವೆಂಬರ್.22 : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಆಭರಣಗಳು, ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ‘ರಾಜಸ್ಥಾನ ಗ್ರಾಮೀಣ ಮೇಳ’ದ ಉದ್ಘಾಟನೆಯು ಮಂಗಳವಾರ ನಗರದ ಬಂಟ್ಸ್ ಹಾಸ್ಟೇಲ್ ಸಮೀಪದ ಹೋಟೇಲ್ ವುಡ್‌ಲ್ಯಾಂಡ್ಸ್‌‍ನಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ಜಗನ್ನಾಥ್ ಶೆಟ್ಟಿ ಬಾಳ ಅವರು ರಾಜಸ್ಥಾನ ಗ್ರಾಮೀಣ ಮೇಳವನ್ನು ಉದ್ಘಾಟಿಸಿ ಶುಭಾ ಹಾರೈಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಸ್ಥಾನ ಗ್ರಾಮೀಣ ಮೇಳದ ಸಂಘಟಕ ದಿನೇಶ್ ಶರ್ಮಾ ಅವರು, ವಿವಿಧ ರಾಜ್ಯಗಳ ಕರಕುಶಲ, ಕೈಮಗ್ಗ ಸೀರೆಗಳು ಹಾಗೂ ಆಭರಣ ಮತ್ತು ಕಲಾಕೃತಿಗಳ ಪ್ರದರ್ಶನವು ನಡೆಯಲಿದೆ. ಮೇಳವು ನ.30ರವರೆಗೆ ನಡೆಯಲಿದೆ ಎಂದರು.

ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು ಮತ್ತು ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು, ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓರಿಸ್ಸಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬ್ಲಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್ಶೀಟ್ಗಳು, ಹಾಗೂ ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್ಶೀಟ್ಗಳು ಹಾಗೂ ಇನ್ನಿತರ ಕೈಮಗ್ಗದ ಸೀರೆಗಳು ಇಲ್ಲಿ ಲಭ್ಯವಿರುವುದು.

ಮಾತ್ರವಲ್ಲದೇ ಜೋಧ್ಪುರ್ ಕರಕುಶಲ ಮರದ ಪಿಠೋಪರಣಗಳು, ಸಾರಂಗ್ಪುರ್ ಮರದ ಪಿಠೋಪರಣಗಳು, ಹೈದಾರ್ಬಾದ್ ಕಪ್ಪು ಮೆಟಲ್ನ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕಾರಿ ಐಟಮ್ ಗಳ ಬೃಹತ್ ಸಂಗ್ರಹ ಇಲ್ಲಿವೆ ಎಂದು ದಿನೇಶ್ ಶರ್ಮಾ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೇಳದ ಡಿಸೈನರ್ ಗಳಾದ ಒಡಿಸ್ಸಾದ ವಿಜಯ್ ಚಿನ್ನರಾಯ್, ಮುಹಮ್ಮದ್ ಅಸ್ಲಂ ಮತ್ತು ಸೈಯದ್ ಮುಸ್ತಫಾ ಉಪಸ್ಥಿತರಿದ್ದರು.

Comments are closed.