ಕರಾವಳಿ

ಪ್ರತಿಷ್ಠಿತ ಬಿಐಎಸ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಸಚಿವ ಯು.ಟಿ. ಖಾದರ್ ನೇಮಕ

Pinterest LinkedIn Tumblr

ಮ0ಗಳೂರು ನವೆಂಬರ್ 22: ರಾಷ್ಟ್ರ ಮಟ್ಟದ ಗುಣಮಟ್ಟ ಮಾಪನ ಸಂಸ್ಥೆ ಪ್ರತಿಷ್ಠಿತ BIS (Beauro of Indian Standard) ರಾಷ್ಟ್ರೀಯ ಗವನಿರ್ಂಗ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಅವರನ್ನು ಕೇಂದ್ರ ಸರಕಾರ ನೇಮಿಸಿ ಆದೇಶ ಹೊರಡಿಸಿದೆ.

ರಾಷ್ಟ್ರಮಟ್ಟದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರು ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಟ್ಟು 6 ಮಂದಿ ಸದಸ್ಯರಿರುವ ಬಿಐಎಸ್ ಸಂಸ್ಥೆಗೆ ದಕ್ಷಿಣ ಭಾರತದಿಂದ ಸಚಿವ ಯು.ಟಿ.ಖಾದರ್ ನೇಮಕರಾಗಿದ್ದಾರೆ. ನ.22ರಂದು ಸಮಿತಿಯ ಮೊದಲ ಸಭೆ ನವದೆಹಲಿಯಲ್ಲಿ ನಡೆಯಲಿದೆ.

Comments are closed.