ಕುಂದಾಪುರ: ಇತಿಹಾಸ ಪ್ರಸಿದ್ಧ ಕುಂದಾಪುರ ತಾಲೂಕಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಬ್ರಹ್ಮರಥೋತ್ಸವ ಮತ್ತು ಅಷ್ಟೋತ್ತರ ನಾಳಿಕೇರ ಮಹಾಗಣಪತಿಯಾಗ ನ.೨೨ ಬುಧವಾರ ಸಂಭ್ರಮ ಹಾಗೂ ಸಡಗರದಿಂದ ಜರುಗಿತು.
ರಥೋತ್ಸವದ ದಿನವಾದ ಬುಧವಾರ ಬೆಳಿಗ್ಗಿನಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮಧ್ಯಾಹ್ನದ ಸುಮಾರಿಗೆ ನಡೆದ ಮಹಾಮಂಗಳಾರತಿ ಬಳಿಕ ನಡೆದ ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಘೊಂಡು ಭಕ್ತಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಆಗಮಿಸುವ ಎಲ್ಲಾ ಭಕ್ತರಿಗೂ ಪಾನಕ ಸೇವೆ ಹಾಗೂ ಅನ್ನಸಂತರ್ಪಣೆ ನಡೆಯಿತು.
Comments are closed.