ಕರಾವಳಿ

ಉಡುಪಿಯಲ್ಲಿ ಕಲ್ಲಿನಿಂದ ಜಜ್ಜಿ, ಚೂರಿಯಿಂದ ಇರಿದು ವ್ಯಕ್ತಿಯ ಮರ್ಡರ್

Pinterest LinkedIn Tumblr

ಉಡುಪಿ: ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು, ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಉಡುಪಿಯ ಬಡಗಬೆಟ್ಟು ಬೈಲೂರಿನಲ್ಲಿ ನಡೆದಿದೆ. ಇಲ್ಲಿನ ವಾಸುಕಿ ನಗರದ ನಿವಾಸಿ ವಸಂತ್ ಕುಮಾರ್( 55) ವರ್ಷ ಹತ್ಯೆಗೀಡಾದ ವ್ಯಕ್ತಿ.

ತನ್ನ ಸಹೋದರಿಯೊಂದಿಗೆ ಮನೆಯಲ್ಲಿ ವಾಸವಿದ್ದ ವಸಂತ್ ಕುಮಾರ್ ನಿನ್ನೆ ಮನೆಯಲ್ಲಿ ಒಬ್ಬೊಂಟಿಯಾಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿ ಕಿರುಚಾಡಿವ ಶಬ್ದ ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರಿಗೆ ಕಸದ ಗುಂಡಿಯಲ್ಲಿ ವಸಂತ್ ಕುಮಾರ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡುತ್ತಾರೆ. ಆದರೇ ವಸಂತ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Comments are closed.