ಕರಾವಳಿ

ನಂತೂರು ಬಳಿ ಬಸ್-ಕಂಟೈನರ್ ಢಿಕ್ಕಿ – ಓರ್ವ ಮಹಿಳೆ ಮೃತ್ಯು – 20ಕ್ಕೂ ಹೆಚ್ಚು ಮಂದಿಗೆ ಗಾಯ

Pinterest LinkedIn Tumblr

ಮಂಗಳೂರು, ಡಿಸೆಂಬರ್.7: ನಗರದ ನಂತೂರು ಜಂಕ್ಷನ್‌ನಲ್ಲಿ ಇಂದು ಬೆಳಿಗ್ಗೆ ನಡೆದ ವಾಹನ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು ಸುಮಾರು 21 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಖಾಸಗಿ ಬಸ್ ಮತ್ತು ಕಂಟೈನರ್ ಮುಖಾಮುಖಿ ಢಿಕ್ಕಿಯಾಗಿದ್ದು, ಅಪಘಾತದಲ್ಲಿ ಬಸ್ಸಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಬಸ್ಸಿನಲ್ಲಿದ್ದ ಸುಮಾರು 21 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬಸ್ ಮಂಗಳೂರಿನಿಂದ ಮಳಲಿಗೆ ಪಯಣ ಬೆಳೆಸುತ್ತಿತ್ತು ಎನ್ನಲಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.