ಕರಾವಳಿ

ಮಂಗಳೂರು ಜೈಲಿನಲ್ಲಿ ಕೈದಿಗಳ ಹೊಡೆದಾಟ : ಜಗಳ ಬಿಡಿಸಲು ಬಂದ ಜೈಲರ್‌ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಮಂಗಳೂರು, ಜನವರಿ.8: ಒಂದಲ್ಲ ಒಂದು ಪ್ರಕರಣಗಳ ಮೂಲಕ ಸದಾ ಸುದ್ಧಿಯಲ್ಲಿರುವ ದ.ಕ. ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ ನಡೆದಿದ್ದು, ಜೈಲರ್ ಸೇರಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋಮವಾರ ಸಂಜೆ ಘಟನೆ ನಡೆದಿದ್ದು, ಹೊಡೆದಾಟದಲ್ಲಿ ಇಬ್ಬರು ಕೈದಿಗಳು ಗಾಯಗೊಂಡಿದ್ದಾರೆ. ಜಗಳವನ್ನು ಬಿಡಿಸಲು ಹೋಗಿದ್ದ ಜೈಲರ್ ಮೇಲೂ ಹಲ್ಲೆ ನಡೆದಿದ್ದು, ಮೂವರು ಗಾಯಾಳುಗಳನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ.

ಇಂದು ಸಂಜೆ ಸಾರ್ವಜನಿಕರು ಖೈದಿಗಳನ್ನು ಭೇಟಿ ಮಾಡುವ ಸಮಯದಲ್ಲಿ ಓರ್ವ ಕೈದಿ ಇನ್ನೋರ್ವನನ್ನು ಗುರಾಯಿಸಿ ನೋಡಿದ್ದ ಎಂಬ ಕ್ಷುಲ್ಲಕ ಕಾರಣಕಾಗಿ ಕೈದಿಗಳ ಮಧ್ಯೆ ವಾಗ್ವಾದ ನಡೆದು ಬಳಿಕ ಕೈದಿಗಳು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಇವರನ್ನು ಬಿಡಿಸಲು ಹೋದ ಜೈಲು ಸಿಬ್ಬಂದಿ ಜೈಲರ್ ಎಸ್.ಬಿ.ಪಾಟೀಲ್ ಅವರ ಎಡಗೈಗೆ ಗಾಯವಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಳ್ಳಲಾಗಿದೆ.

Comments are closed.