ಕರಾವಳಿ

ಮಂಗಳೂರಿನಲ್ಲಿ ಇನ್ನೊಂದು ಮರ್ಡರ್ : ಉಳ್ಳಾಲದ ಟಾರ್ಗೆಟ್ ಗ್ರೂಪ್‌ನ ಮುಖ್ಯಸ್ಥ ಇಲಿಯಾಸ್‌ ಹತ್ಯೆ

Pinterest LinkedIn Tumblr

ಮಂಗಳೂರು, ಜನವರಿ.13: ಉಳ್ಳಾಲದ ಟಾರ್ಗೆಟ್ ಗ್ರೂಪ್‌ನ ಮುಖ್ಯಸ್ಥ ಇಲಿಯಾಸ್ ನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜಪ್ಪಿನ ಮೊಗರುವಿನಲ್ಲಿ ನಡೆದಿದ್ದು, ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಫರಂಗಿಪೇಟೆಯಲ್ಲಿ ನಡೆದ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಈತ ಎರಡು ದಿನಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎನ್ನಲಾಗಿದೆ.

ಇಲಿಯಾಸ್ ನನ್ನು ಜಪ್ಪು ಕುಡ್ಪಾಡಿಯಲ್ಲಿರುವ ಆತನ ಫ್ಲಾಟ್ ನಲ್ಲಿ ವಿರೋಧಿ ಗುಂಪು ದಾಳಿ ನಡೆಸಿ ಚಾಕುವಿನಿಂದ ಇರಿದು ಪರಾರಿಯಾಗಿದೆ ಎನ್ನಲಾಗಿದೆ. ಜಪ್ಪು ಕುಡ್ಪಾಡಿ ಎಂಬಲ್ಲಿನ ಫ್ಲಾಟ್ ನಲ್ಲಿ ಇದ್ದ ಸಂದರ್ಭ ಇಬ್ಬರು ದುಷ್ಕರ್ಮಿಗಳು ಇಲ್ಯಾಸ್ ಎದೆ ಭಾಗಕ್ಕೆ ಹರಿತವಾದ ಆಯುಧಗಳಿಂದ ಇರಿದಿದ್ದರು. ಗಂಭೀರವಾಗಿ ಗಾಯಗೊಂಡ ಇಲ್ಯಾಸ್ ನನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಇಲ್ಯಾಸ್ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ.ಇಲಿಯಾಸ್ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಇದೊಂದು ವೈಷ್ಯಮ್ಯದ ಹಿನ್ನೆಲೆಯಲ್ಲಿ ನಡೆದ ( ಗ್ಯಾಂಗ್‌ವಾರ್) ಕೊಲೆ ಇರಬೇಕೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Comments are closed.