ಮಂಗಳೂರು : ಜನವರಿ 23ರಂದು ಸುರತ್ಕಲ್ನ ಗೋವಿಂದದಾಸ ಕಾಲೇಜಿನಲ್ಲಿ ಪ್ರೋಎಚ್. ರಮೇಶ ಕೆದಿಲಾಯರ ಸಮ್ಮೇಳನಾಧ್ಯಕ್ಷತೆಯಲ್ಲಿ ಜರಗಲಿರುವ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಮಂತ್ರಣ ಪತ್ರಿಕೆಯನ್ನು ಹಿರಿಯ ರಂಗಕರ್ಮಿ ಸದಾನಂದ ಸುವರ್ಣರು ಬಿಡುಗಡೆಗೊಳಿಸಿದರು.
ಕನ್ನಡ ನಾಡಿನ ಬಹುತ್ವದ ಹಾಗೂ ಸೌಹಾರ್ದತೆಯಆಶಯವು ಸಮ್ಮೇಳನದಲ್ಲಿ ಅಭಿವ್ಯಕ್ತಿಗೊಳ್ಳಲೆಂದು ಅವರು ಹಾರೈಸಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಎಸ್. ಪ್ರದೀಪ ಕುಮಾರ ಕಲ್ಕೂರ, ಕ.ಸಾ.ಪ. ಮಂಗಳೂರು ತಾಲೂಕು ಘಟಕ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ. ಶೆಟ್ಟಿ, ಪದಾಧಿಕಾರಿಗಳಾದ, ಪ್ರೋ. ಪಿ. ಕೃಷ್ಣ ಮೂರ್ತಿ, ಶ್ರೀಮತಿ ಅರುಣಾಕುಮಾರಿ ನಾಗರಾಜ, ಶ್ರೀಮತಿ ವಿಜಯಲಕ್ಷ್ಮೀ ಭಟ್ ಉಳುವಾನ, ಶ್ರೀಮತಿ ದಯಾಮಣಿ ವಿ. ಕೋಟ್ಯಾನ್, ಸದಾಶಿವ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Comments are closed.