ಕರಾವಳಿ

ಬ್ರಹ್ಮಾವರ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; 8 ಲಾರಿ, 28ದೋಣಿ ವಶಕ್ಕೆ, ಹಲವರು ವಶಕ್ಕೆ

Pinterest LinkedIn Tumblr

ಉಡುಪಿ: ಅಕ್ರಮ‌ ಮರಳುಗಾರಿಕೆ ಅಡ್ಡೆಗೆ ಬೆಳ್ಳಂಬೆಳಿಗ್ಗೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ.

ಉಡುಪಿ ತಾಲೂಕಿನ ಬ್ರಹ್ಮಾವರ ಬಳಿಯ ಹಂದಾಡಿ ಗ್ರಾಮದ ಸೀತಾನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ. ಕುಂದಾಪುರ ಸಹಾಯಕ ಅಯುಕ್ತ ಭೂಬಾಲನ್ ನೇತೃತ್ಬದಲ್ಲಿ ಅಕ್ರಮ ಮರಳುಗಾರಿಕೆ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಲಾಗಿದ್ದು ಸುಮಾರು 10 ಅಡ್ಡೆಗಳ ಮೇಲೆ ರೇಡ್ ಮಾಡಲಾಗಿದೆ. ಮರಳುಗಾರಿಕೆ ಬಳಸುತ್ತಿದ್ದ 8 ಲಾರಿ,28 ದೋಣಿಗಳ ಸಹಿತ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಅಕ್ರಮ‌ ಮರಳುಗಾರಿಕೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರೋರ್ವರು ಭಾಗಿಯಾಗಿದ್ದಾರೆನ್ನಲಾಗಿದ್ದು ದಾಳಿ ವೇಳೆ ಗ್ರಾಮ ಪಂಚಾಯತ್ ಸದಸ್ಯ ತಿಮ್ಮಪ್ಪ ಶೆಟ್ಟಿ ಸೇರಿದಂತೆ ಹತ್ತು ಮಂದಿ ಪರಾರಿಯಾಗಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.