ಕುಂದಾಪುರ: ಸಂಬಂಧಿಯಿಂದಲೇ ನಿರಂತರ ನಡೆದ ಅತ್ಯಾಚಾರದ ಬಗ್ಗೆ ವಿದ್ಯಾರ್ಥಿನಿ ಆರೋಪಿಸಿದ್ದಾಳೆ.
ಸ್ವತಃ ದೊಡ್ಡಪ್ಪನಿಂದಲೇ ತನ್ನ ಮೇಲೆ ನಿರಂತರ ಅತ್ಯಾಚಾರ ನಡೆದಿದೆ ಎಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ.ಕುಂದಾಪುರ ತಾಲೂಕಿನ ಹಾಲಾಡಿಯ ಗ್ರಾಮೀಣ ಪ್ರದೇಶದಲ್ಲಿ ಈ ಘಟನೆ ನಡೆದಿದೆ
ನೊಂದ ಬಾಲಕಿ ನೀಡಿದ ದೂರಿನಂತೆ ಆರೋಪಿ ನಾರಾಯಣ(54) ಎಂಬಾತನನ್ನು ಬಂಧಿಸಲಾಗಿದೆ.
ಇತ್ತೀಚಿನ ಕೆಲವು ದಿನಗಳಿಂದ ಸಂತ್ರಸ್ತೆ ಬಾಲಕಿ ಶಾಲೆಯಲ್ಲಿ ಮಂಕಾಗಿದ್ದಳು. ಇದನ್ನು ಗಮನಿಸಿದ ಶಿಕ್ಷಕರು ಬಾಲಕಿಯನ್ನು ವಿಚಾರಣೆ ವೇಳೆ ಆಕೆ ನಡೆದ ಸಂಗತಿ ಬಾಯ್ಬಿಟ್ಟಿದ್ದಾಳೆ. ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.