ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಚ್ಚಿಲ, ಬಡಾ ಎರ್ಮಾಳು ಗ್ರಾಮದ ಅಬ್ದುಲ್ ರೆಹಮಾನ್ ಸಫ್ವಾನ್ (29) ಬಂಧಿತ ಆರೋಪಿ.
ಸೆನ್ ಅಪರಾಧ ಪೊಲೀಸ್ ಠಾಣೆಯ ನಿರೀಕ್ಷಕ ಸೀತಾರಾಮ ಅವರಿಗೆ ದೊರೆತ ಮಾಹಿತಿಯಂತೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಣಿಪಾಲ ಎಮ್.ಐ.ಟಿ. ನಾಗಬನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡಲು 1 ಕಿಲೋ 524 ಗ್ರಾಂ ಗಾಂಜಾ ಹೊಂದಿದ್ದ ವೇಳೆ ಆರೋಪಿಯನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ವಶಪಡಿಸಲಾದ ಸ್ವತ್ತಿನ ಮೌಲ್ಯ ರೂಪಾಯಿ 22,500/- ಆಗಿದೆ.
ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.