ಕರಾವಳಿ

ಬ್ರಹ್ಮಕಲಶೋತ್ಸವ ಹಿನ್ನೆಲೆ : ಕುಡುಪು ಶ್ರೀ ಕ್ಷೇತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಭೇಟಿ

Pinterest LinkedIn Tumblr

ಮಂಗಳೂರು : ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ನಿನ್ನೆ ಶ್ರೀ ಕ್ಷೇತ್ರದಲ್ಲಿ ನಡೆದ ಕಲಶಾಭಿಷೇಕ, ತಂಬಿಲ ಹಾಗೂ ವಿಶೇಷ ಮಹಾಪೂಜೆಯಲ್ಲಿ ಖ್ಯಾತ ಚಲನಚಿತ್ರ ನಟ, ಸಂಗೀತ ನಿರ್ದೇಶಕ ಗುರುಕಿರಣ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗುರುಕಿರಣ್ ಅವರಿಗೆ ಶ್ರೀ ಕ್ಷೇತ್ರದ ವತಿಯಿಂದ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಎ. ಸುತಗುಂಡಿ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಶ್ರೀ ಕ್ಷೇತ್ರದ ಮೊಕ್ತೇಸರ ಭಾಸ್ಕರ ಕೆ. ಪ್ರಧಾನ ಕಾರ್ಯದರ್ಶಿ ಕೆ. ಸುಜನ್‌ದಾಸ್ ಕುಡುಪು, ಅನುವಂಶಿಕ ಅರ್ಚಕರಾದ ಪಿ. ಅನಂತ ಭಟ್, ವಾಸುದೇವ ರಾವ್ ಕುಡುಪು, ಪುಷ್ಪರಾಜ ಪೂಜಾರಿ, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.