ಕರಾವಳಿ

ಬೆಂಗರೆ : ಬಸ್ಸಿನಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ತಂಡದಿಂದ ಹಲ್ಲೆ : ಇಬ್ಬರು ಗಂಭೀರ

Pinterest LinkedIn Tumblr

ಮಂಗಳೂರು: ಮಂಗಳೂರಿನ ಬೆಂಗ್ರೆ ಬಳಿ ಮಲ್ಪೆ ಮೀನುಗಾರರ ಸಮಾವೇಶ ಮುಗಿಸಿ ವಾಪಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಸುಮಾರು 30 ರಿಂದ 40 ಜನರ ತಂಡದಿಂದ ಬ್ಲೆಡ್ ಚಾಕುಗಳಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಉಪಸ್ಥಿತಿಯಲ್ಲಿ ಮಂಗಳವಾರ ಮಲ್ಪೆಯಲ್ಲಿ ನಡೆದ ಮೀನುಗಾರರ ಸಮಾವೇಶ ಮುಗಿಸಿ ವಾಪಸಾಗುತ್ತಿದ್ದ ಕಾರ್ಯಕರ್ತರ ಬಸ್ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡದಿಂದ ಹಲ್ಲೆ ನಡೆದಿದೆ.ಬಸ್‌ನಲ್ಲಿದ್ದವರ ಮೇಲೆ ಚೂರಿಯಿಂದ ಹಲ್ಲೆ ನಡೆಸಲಾಗಿದೆ. ಈ ವೇಳೆ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.