ಕರಾವಳಿ

ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಬೈಕ್ ಗೆ ಲಾರಿ ಢಿಕ್ಕಿ : ದ್ವಿಚಕ್ರ ಚಾಲಕ ಗಂಭೀರ

Pinterest LinkedIn Tumblr

ಉಳ್ಳಾಲ, ಮಾರ್ಚ್. 6: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಜಂಕ್ಷನ್ ಬಳಿ ಮಂಗಳವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ಚಾಲಕ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಉಂಟಾದ ಅಪಘಾತದಲ್ಲಿ ಬೈಕ್ ಚಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣ ಗಾಯಾಳುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ.

ಅಪಘಾತ ನಡೆದ ತಕ್ಷಣ ಲಾರಿ ಚಾಲಕ ಪರಾರಿಯಾಗಿದ್ದಾನೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Comments are closed.