ಕರಾವಳಿ

ಪೊಲೀಸರಿಂದ ವೀಡಿಯೊ ಕಣ್ಣು : ಮಂಗಳೂರಿನಲ್ಲಿ ಕುಡಿದು ವಾಹನ ಚಲಾಯಿಸಿದರೆ ಕಾದಿದೆ ಅಪತ್ತು…

Pinterest LinkedIn Tumblr

ಮಂಗಳೂರು, ಮಾರ್ಚ್. 9: ಮಧ್ಯ ಕುಡಿದು ವಾಹನ ಚಲಾಯಿಸುವ ಚಾಲಕರಿಗೆ ಪೊಲೀಸ್ ಇಲಾಖೆ ಶಾಂಕಿಂಗ್ ನ್ಯೂಸ್ ನೀಡಿದೆ. ಹೌದು ಮಂಗಳೂರಿನಲ್ಲಿ ಇನ್ನು ಮುಂದೆ ಮದ್ಯಪಾನ ಮಾಡಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ವೀಡಿಯೊ ರೆಕಾರ್ಡಿಂಗ್ ಮಾಡಿ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಜರಗಿಸಲಾಗುತ್ತದೆ.

ಮಂಗಳೂರಿನ ನಗರ ಪೊಲೀಸ್ ಅಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರು,ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಬಸ್, ರಿಕ್ಷಾ, ಕಾರು, ಬೈಕ್ ಮತ್ತಿತರ ವಾಹನಗಳ ಚಾಲಕರ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಬಗ್ಗೆ ವೀಡಿಯೊ ರೆಕಾರ್ಡಿಂಗ್ ಮಾಡಿ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಜರಗಿಸಲಾಗುವುದು ಎಂದು ಹೇಳಿದ್ದಾರೆ.

ನರ್ಮ್ ಬಸ್ಸುಗಳು ಕೆಲವು ಮಾರ್ಗಗಳಲ್ಲಿ ರಾತ್ರಿ ಏಳೂವರೆ ಗಂಟೆ ಬಳಿಕ ಓಡಾಡುತ್ತಿಲ್ಲ ಎಂದು ಸಾರ್ವಜನಿಕರೊಬ್ಬರು ದೂರು ನೀಡಿದರು. ಈ ಬಗ್ಗೆ ಕೆಎಸ್ಸಾರ್ಟಿಸಿ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಕಮಿಷನರ್ ತಿಳಿಸಿದರು.

ಮೀನಿನ ಲಾರಿಗಳು ರಸ್ತೆಯಲ್ಲಿ ನೀರು ಚೆಲ್ಲುತ್ತಾ ಸಾಗುತ್ತಿರುವ ಬಗ್ಗೆ ಸಾರ್ವಜನಿಕರು ನೀಡಿದ ದೂರುಗಳಿಗೆ ಉತ್ತರಿಸಿದ ಕಮಿಷನರ್, ಈ ಕುರಿತಂತೆ ಮೀನಿನ ಲಾರಿಗಳನ್ನು ನಿರ್ಗಮನ ಪಾಯಿಂಟ್ನಲ್ಲಿ (ಹಳೆ ಬಂದರು) ತಪಾಸಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಸಿಟಿ ಬಸ್ ಕಾರ್ಮಿಕರಿಗೆ ತರಬೇತಿಯನ್ನು ಏರ್ಪಡಿಸಿ ವಾಹನ ಚಾಲನೆ ಮತ್ತು ಸಾರ್ವಜನಿಕರ ಜತೆ ವ್ಯವಹರಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದ್ದರೂ ಬಸ್ ಸಿಬ್ಬಂದಿ ಸುಧಾರಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತರು ಇನ್ನು ಮುಂದೆ ನೋಟಿಸ್ ನೀಡುವುದಿಲ್ಲ, ವೀಡಿಯೊ ಚಿತ್ರೀಕರಣ ಮಾಡಿ ನೇರವಾಗಿ ಕೇಸು ದಾಖಲಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಡಿಸಿಪಿಡಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್, ಎಸಿಪಿಗಳಾದ ಮಂಜುನಾಥ ಶೆಟ್ಟಿ ಮತ್ತು ವೆಲೆಂಟೈನ್ ಡಿಸೋಜ, ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಶಿವಪ್ರಕಾಶ್, ಕುಮಾರಸ್ವಾಮಿ, ಚಂದ್ರ, ಎಎಸ್ಸೈ ಯೂಸುಫ್, ಹೆಡ್ ಕಾನ್ಸ್‌ಟೆಬಲ್ ಪುರುಷೋತ್ತಮ, ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಜತೆ ಕಾರ್ಯದರ್ಶಿ ರಾಮಚಂದ್ರ ಪಿಲಾರು ಮುಂತಾದವರು ಉಪಸ್ಥಿತರಿದ್ದರು.

Comments are closed.