ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿತ್ರನಟ ಪ್ರಕಾಶ್ ರೈಗೆ ಬೆದರಿಕೆ ; ಕಾರು ಚಾಲಕನಿಗೆ ಧಮ್ಕಿ

Pinterest LinkedIn Tumblr

ಮಂಗಳೂರು, ಮಾರ್ಚ್.14: ಖ್ಯಾತ ನಟ ಪ್ರಕಾಶ್ ರೈ ಅವರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು, ಸ್ವತ; ಪ್ರಕಾಶ್ ರೈ ಅವರೇ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

ಬುಧವಾರ ಮಂಗಳೂರು ಪತ್ರಿಕಾ ಭವನದಲ್ಲಿ ಪತ್ರಕರ್ತರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ತಾನು ಇಂದು ನಗರದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ನಿನ್ನೆ ರಾತ್ರಿ ಮಂಗಳೂರಿಗೆ ಆಗಮಿಸಿದ್ದ ಸಂದರ್ಭ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಾರೋ ನಾಲ್ಕು ಜನ ಬಂದು ನನ್ನ ಕಾರು ಚಾಲಕನ ಬಳಿ ನನ್ನ ಬಗ್ಗೆ ಪ್ರಶ್ನಿಸಿದ್ದಾರೆ, ನಾನು ಎಲ್ಲಿ ಉಳಿದುಕೊಳ್ಳುತ್ತೇ ಎಂದು ಕೇಳಿದ್ದಾರೆ, ಪೊಲೀಸರು ಬಂದ ಕೂಡಲೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಹೇಳಿದರು.

”ವಿಮಾನ ನಿಲ್ದಾಣಕ್ಕೆ ನಿನ್ನೆ ಬಂದ ಸಂದರ್ಭ ನನ್ನ ಕಾರು ಚಾಲಕನ ಬಳಿ ನಾಲ್ವರು ಅಪರಿಚಿತರು ಬಂದು ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ ಕಾರು ಚಾಲಕನಿಗೆ ಬೆದರಿಸಿ ಧಮ್ಕಿ ಕೂಡಾ ಹಾಕಿದ್ದಾರೆ. ಇಂತಹ ಭಯ ಹುಟ್ಟಿಸುವ ವಾತಾವರಣವನ್ನು ನನ್ನ ನೆಲದಲ್ಲೇ ಸೃಷ್ಟಿಸುತ್ತಿರುವ ಬಗ್ಗೆ ನನಗೆ ಬೇಸರವಾಗುತ್ತಿದೆ” ಎಂದು ಪ್ರಕಾಶ್ ರೈ ಅಸಮಾಧಾನ ವ್ಯಕ್ತಪಡಿಸಿದರು.

ಈ ರೀತಿಯ ಹೆದರಿಕೆಗಳಿಗೆ ಬಗ್ಗುವುದಿಲ್ಲ ಎಂದ ಅವರು ಜಸ್ಟ್ ಆಸ್ಕಿಂಗ್ ಅಭಿಯಾನ ಮುಂದುವರೆಯಲಿದೆ ಎಂದರು. ರಾಜಕಾರಣದ ಬಗ್ಗೆಯೂ ಮಾತನಾಡಿದ ಅವರು ‘ರಾಜಕೀಯದಲ್ಲಿ ಆತಂಕದ ವಾತಾವರಣ ಇದೆ, ನಾನು ಆಳುವ ಪಕ್ಷದ ವಿರೋಧಿಯಾಗಿದ್ದೇನೆ, ಒಬ್ಬ ಪ್ರಜೆ, ಪ್ರಜೆಯಾಗಿರೋದಕ್ಕೆ ಇಂದಿನ ವ್ಯವಸ್ಥೆಯಲ್ಲಿ ಸಾಧ್ಯವಾಗುತ್ತಿಲ್ಲ, ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ’ ಎಂದು ಅವರು ಆತಂಕ ವ್ಯಕ್ತಪಡಿಸಿದರು.

Comments are closed.