ಕರಾವಳಿ

ಬಂದರ್‌ನಲ್ಲಿ ಅಗ್ನಿ ಅವಘಡ : ಗುಜರಿ ಅಂಗಡಿ ಬೆಂಕಿಗಾಹುತಿ : ಲಕ್ಷಾಂತರ ರೂ. ನಷ್ಟ

Pinterest LinkedIn Tumblr

ಮಂಗಳೂರು, ಮಾರ್ಚ್.16: ಮಂಗಳೂರಿನ ಬಹುದೊಡ್ಡ ವ್ಯಾಪಾರ ವಹಿವಾಟು ನಡೆಯುವ ಜನನಿಬಿಡ ಸ್ಥಳವಾದ ಬಂದರು ಪ್ರದೇಶದ ಗುಜರಿ ಅಂಗಡಿಯಲ್ಲಿ ಇಂದು ಬೆಳಿಗ್ಗೆ ಉಂಟಾದ ಆಕಸ್ಮಿಕ ಬೆಂಕಿ ಅವಘಡದಿಂದ ಅಂಗಡಿಯಲ್ಲಿದ್ದ ಸೊತ್ತುಗಳೆಲ್ಲ ಸುಟ್ಟು ಕರಕಲಾದ ಘಟನೆ ನಡೆದಿದೆ.

ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಿಂದ ಅನತಿ ದೂರದಲ್ಲಿರುವ ಬೀಬಿ ಅಲಾಬಿ ರಸ್ತೆಯಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಈ ಬೆಂಕಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಗುಜರಿ ಸಾಮಗ್ರಿಗಳ ಈ ಅಂಗಡಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಇಡೀ ಅಂಗಡಿಗೆ ವ್ಯಾಪಿಸಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಿದರು.

ಬೆಂಕಿಯ ಕೆನ್ನಾಲಗೆಗೆ ಪ್ರದೇಶದಲ್ಲಿ ವ್ಯಾಪಕ ಹೊಗೆ ಆವರಿಸಿಕೊಂಡಿತ್ತು. ಬೆಂಕಿಯು ಗುಜರಿ ಅಂಗಡಿಯ ಅಕ್ಕಪಕ್ಕದಲ್ಲಿರುವ ಅಂಗಡಿಗಳಿಗೂ ಅಲ್ಪಸ್ವಲ್ಪ ಹಾನಿ ಉಂಟು ಮಾಡಿದೆ. ಬೆಂಕಿ ಅನಾಹುತದಿಂದ ಭಾರೀ ಪ್ರಮಾಣದಲ್ಲಿ ಗುಜರಿ ಸೊತ್ತುಗಳು ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.ಆದರೆ ಘಟನೆಗೆ ನಿರ್ಧಿಷ್ಟ ಕಾರಣ ಇನ್ನು ತಿಳಿದು ಬಂದಿಲ್ಲ.

Comments are closed.