ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಗುರುರಾಜ್ ಕಾಮನ್ವೆಲ್ತ್ ಬೆಳ್ಳಿ ಪದಕ ವಿಜೇತ ಕುಂದಾಪುರ ಮೂಲದ ಗುರುರಾಜ್ ಪೂಜಾರಿಗೆ 25 ಲಕ್ಷ ನಗದು, ಸರಕಾರಿ ನೌಕರಿ ನೀಡುವುದಾಗಿ ಸಚಿವರು ನೀಡಿದ್ದ ಹೇಳಿಕೆಗೆ ಚುನಾವಣಾ ಆಯೋಗದ ಅಧಿಕಾರಿಗಳು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಪ್ರಕರಣ ದಾಖಲು ಮಾಡಿದ್ದಾರೆ.
ಪತ್ರಿಕೆಗಳು ಹಾಗೂ ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾದ ಮಧ್ವರಾಜ್ ಹೇಳಿಕೆಗಳನ್ನು ದಾಖಲೆಯಾಗಿಟ್ಟುಕೊಂಡು ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ. ಈ ಹಿಂದೆ ಪ್ರಮೋದ್ ಮಧ್ವರಾಜ್ ಪ್ರಚಾರದ ವಾಹನವನ್ನು ಅಧಿಕಾರಿಗಳು ಸೀಜ್ ಮಾಡಿದ್ದರು.
Comments are closed.