ಕರಾವಳಿ

ಪಾಂಡೇಶ್ವರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ : ಹಲವರ ಬಂಧನ – ಪ್ರಕರಣ ದಾಖಲು

Pinterest LinkedIn Tumblr

ಮಂಗಳೂರು, ಎಪ್ರಿಲ್.13: ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ ನಡೆದ ಘಟನೆ ಗುರುವಾರ ನಗರದ ಪಾಂಡೇಶ್ವರದ ಶ್ರೀನಿವಾಸ್ ಕಾಲೇಜಿನಲ್ಲಿ ನಡೆದಿದ್ದು, 15 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಪರಾಹ್ನ ಸುಮಾರು 2:30ರ ವೇಳೆಗೆ ವಿದ್ಯಾರ್ಥಿಗಳ ಎರಡು ತಂಡಗಳು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಟದಲ್ಲಿ ತೊಡಗಿತ್ತು ಎನ್ನಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಜಗಳ ಬಿಡಿಸಲು ಯತ್ನಿಸಿದರು. ಆದರೆ ವಿದ್ಯಾರ್ಥಿಗಳು ಪೊಲೀಸರು ಮಾತನ್ನು ಕೇಳದೆ ಜಗಳ ಮುಂದುವರಿಸಿದರು ಎನ್ನಲಾಗಿದೆ. ಹಾಗಾಗಿ ಕೆಲವು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿ ಕೇಸು ದಾಖಲಿಸಲಾಯಿತು ಎಂದು ಪಾಂಡೇಶ್ವರ ಪೊಲೀಸರು ತಿಳಿಸಿದ್ದಾರೆ.

ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಇನ್ನೂ ಕೆಲವರು ಓಡಿ ತಪ್ಪಿಸಿಕೊಂಡಿದ್ದಾರೆ. ಅವರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಘಟನೆಯ ಬಗ್ಗೆ ವಿವರಿಸಿದ್ದಾರೆ.

Comments are closed.