ಕರಾವಳಿ

ಮಂಗಳೂರು ದಕ್ಷಿಣ ಅಭ್ಯರ್ಥಿ ಶ್ರೀಕರ್ ಪ್ರಭು ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯಕ್ಕೆ ಭೇಟಿ : ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾರ್ಥನೆ

Pinterest LinkedIn Tumblr

ಮಂಗಳೂರು,ಎಪ್ರಿಲ್.25: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಯುವ ಮುಂದಾಳು, ಸಾಮಾಜಿಕ ಕಾರ್ಯಾಕರ್ತ ಆರ್ ಶ್ರೀಕರ್ ಪ್ರಭು ಅವರು ಇಂದು ನಡೆದ ನಾಮಪತ್ರ ಪರಿಶೀಲನೆಯ ಬಳಿಕ ನಗರದ ಕಾರ್ ಸ್ಟ್ರೀಟ್ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಕ್ಷೇತ್ರದ ಪ್ರಧಾನ ಅರ್ಚಕರಿಂದ ಪ್ರಸಾದ ಸ್ವೀಕರಿಸಿ, ದೇವರ ಆಶೀರ್ವಾದ ಪಡೆದ ಶ್ರೀಕರ್ ಪ್ರಭು ಅವರು ಚುನಾವಣೆಯಲ್ಲಿ ತಮ್ಮ ಗೆಲುವಿಗಾಗಿ ಹಾಗೂ ಈ ಮೂಲಕ ಜಿಲ್ಲೆಯ ಅಭಿವೃದ್ಧಿಗೊಳಿಸುವ ಅವಕಾಶಕ್ಕಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಶ್ರೀಕರ್ ಪ್ರಭು ಅವರ ಬೆಂಬಲಿಗರು ಹಾಗೂ ಅಪಾರ ಅಭಿಮಾನಿಗಳು ಉಪಸ್ಥಿತರಿದ್ದರು.

Comments are closed.