ಮಂಗಳೂರು: ಜುಲೈ.13: ಕೇಂದ್ರ ಸರಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಉದ್ದೇಶದಿಂದ ನಮೋ ಯೋಜನೆ ಜಾಗೃತಿ ಯುವ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂದೀಪ್ ಶೆಟ್ಟಿ ತಿಳಿಸಿದರು.
ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.15ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಿಂದ ಪ್ರಾರಂಭವಾಗಲಿರುವ ಈ ಜಾಥಾಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಲಿದ್ದಾರೆ.
ಈ ಬೃಹತ್ ಜಾಥಾ ಪುತ್ತೂರು ನಗರ- ಮಾಣಿ- ಕಲ್ಲಡ್ಕ- ಬಿ.ಸಿ.ರೋಡ್ – ಪಡೀಲ್- ನಂತೂರು- ಕೂಳೂರು ಮಾರ್ಗವಾಗಿ ಸುರತ್ಕಲ್ ಬಂಟರ ಭವನದಲ್ಲಿ ಸಮಾರೋಪಗೊಳ್ಳಲಿದೆ. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು ಹಾಗೂ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ರವಿಶಂಕರ್ ಮಿಜಾರ್, ಹರಿಕೃಷ್ಣ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.
Comments are closed.