ಮಂಗಳೂರು, ಜುಲೈ.14: ಮಂಗಳೂರು – ಬೆಂಗಳೂರಿನ ಪ್ರಮುಖ ರಸ್ತೆಯಾಗಿರುವ ಶಿರಾಡಿ ಘಾಟ್ ರಸ್ತೆಯ ದ್ವಿತೀಯ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಗುಂಡ್ಯ (ಬಾರ್ಡರ್)ದಲ್ಲಿ ಜುಲೈ 15ರಂದು ಬೆಳಗ್ಗೆ 11:30ಕ್ಕೆ ಚಾಲನೆ ದೊರೆಯಲಿದೆ.
ಉದ್ಘಾಟನ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ನಗರಾಭಿವೃದ್ಧಿ ಮತ್ತು ವಸತಿ ಯು.ಟಿ. ಖಾದರ್ ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Comments are closed.