ಕರಾವಳಿ

ನೆಲಮಂಗಲದಲ್ಲಿ ರಸ್ತೆ ಅಪಘಾತ : ಕಟೀಲು ದೇವಸ್ಥಾನದ ಅರ್ಚಕರ ಪುತ್ರ ಶ್ರೀನಿಧಿ ಅಸ್ರಣ್ಣ ಸೇರಿದಂತೆ ಇಬ್ಬರು ಮೃತ್ಯು

Pinterest LinkedIn Tumblr

ಶ್ರೀನಿಧಿ ಅಸ್ರಣ್ಣ

ಮಂಗಳೂರು / ಬೆಂಗಳೂರು, ಜುಲೈ. 25: ಲಾರಿಗೆ ಡಿಕ್ಕಿ ಕಾರು ಹೊಡೆದು ಸಂಭವಿಸಿದ ಅಪಘಾತದಲ್ಲಿ ಕಟೀಲು ಶ್ರೀ ದುರ್ಗಾ ಮಕ್ಕಳ ಯಕ್ಷಗಾನ ಮೇಳ್ದ ಅಧ್ಯಕ್ಷ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಶ್ರೀ ಹರಿನಾರಾಯಣದಾಸ ಅಸ್ರಣ್ಣ ಅವರ ಪುತ್ರ ಶ್ರೀನಿಧಿ ಅಸ್ರಣ್ಣ (21) ಸೇರಿದಂತೆ ಇಬ್ಬರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನೆಲಮಂಗಲ ಸಮೀಪದ ತಾವರೆಕೆರೆ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಇನ್ನೋರ್ವರನ್ನು ತುಮಕೂರು ಮೂಲದ ಪ್ರಜ್ವಲ್ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ್ಡಿರುವ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೊಳಪಡಿಸಲಾಗಿದೆ.

ಈ ನಾಲ್ವರು ತುಮಕೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಎಂಜಿನಿಯರಿಂಗ್‌ ವಿದ್ಯಾರ್ಥಿಗಳಾದ ಶ್ರೀನಿಧಿ ಅಸ್ರಣ್ಣ ಮತ್ತು ಪ್ರಜ್ವಲ್ ಇನ್ನಿಬ್ಬರು ಸ್ನೇಹಿತರೊಂದಿಗೆ ಪ್ರಾಜೆಕ್ಟ್ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.

ಶ್ರೀನಿಧಿ ಅಸ್ರಣ್ಣ

ಇವರ ಕಾರು ನೆಲಮಂಗಲ ಸಮೀಪದ ತಾವರೆಕೆರೆ ಬಳಿ ಸಾಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಕಾರು ಮೊದಲು ಲಾರಿಗೆ, ಬಳಿಕ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ

ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.