ಕರಾವಳಿ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ” 2018ಕ್ಕೆ ಚಾಲನೆ : ಸ್ವಚ್ಛತೆ ಹಾಗೂ ಶುಚಿತ್ವ ಕಾಪಾಡಲು ಮೀನಾಕ್ಷಿ ಶಾಂತಿಗೋಡು ಕರೆ

Pinterest LinkedIn Tumblr

ಮಂಗಳೂರು ಜುಲೈ 29 : ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018” ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಅವರು “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018” ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಆಗಸ್ಟ್ 1 ರಿಂದ ಸರ್ಕಾರದಿಂದ ನಿಯೋಜಿತ ಸರ್ವೆ ಏಜೆನ್ಸಿಯ ತಂಡವು ಗ್ರಾಮಗಳಿಗೆ ಭೇಟಿ ನೀಡಿ ನಿಗದಿಗೊಳಿಸಿದ ಮಾನದಂಡಗಳ ಅನ್ವಯ ಪರಿಶೀಲಿಸಿ, ನೈರ್ಮಲ್ಯದ ಬಗ್ಗೆ ಮೌಲ್ಯಮಾಪನ ಮಾಡಿ ಜಿಲ್ಲೆಗಳಿಗೆ ಶ್ರೇಣಿಯನ್ನು ನೀಡಲಿದ್ದಾರೆ ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವುದರಿಂದ ರಾಷ್ಟ್ರದಲ್ಲೇ ಜಿಲ್ಲೆ ಅಗ್ರ ಶ್ರೇಣಿ ಪಡೆಯಲು ಸಾಧ್ಯವಾಗಲಿದೆ ಎಂದರು.

ಸಾರ್ವಜನಿಕ ಸ್ಥಳಗಳು, ಶಾಲೆಗಳು, ಅಂಗನವಾಡಿ ಕೇಂದ್ರಗಳು, ಸಂತೆ ನಡೆಯುವ ಸ್ಥಳ, ಕುಡಿಯುವ ನೀರು ಸಂಗ್ರಹ ಸ್ಥಳಗಳು, ಪಂಚಾಯತ್ ಕಛೇರಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮದ ಮುಖ್ಯ ಬೀದಿಗಳಲ್ಲಿ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಶೌಚಾಲಯಗಳನ್ನು ಸುಸ್ಥಿತಿಯಲ್ಲಿಡುವಂತೆ ಹಾಗೂ ಸ್ವಚ್ಛತೆ ಶುಚಿತ್ವವನ್ನು ಕಾಪಾಡುವ ಮೂಲಕ “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018”ರ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ವಿನಂತಿಸಿದರು.

ಜಿಲ್ಲಾಪಂಚಾಯತ್ ಸಿಇಒ ಡಾ ಎಂ ಆರ್ ರವಿ ಹಾಗೂ ಇತರ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.