ಕರಾವಳಿ

ವಿಧಾನಪರಿಷತ್ ಸದಸ್ಯ ಭೋಜೆಗೌಡರ ವಿವಾದಾತ್ಮಕ ಹೇಳಿಕೆಗೆ ಸಚಿವ ಖಾದರ್ ತಿರುಗೇಟು

Pinterest LinkedIn Tumblr

ಮಂಗಳೂರು, ಆಗಸ್ಟ್. 4: ಕಾಂಗ್ರೆಸ್ ಪಕ್ಷದ ಬಗ್ಗೆ ಜೆಡಿಎಸ್ ವಿಧಾನಪರಿಷತ್ ಸದಸ್ಯ ಭೋಜೆಗೌಡ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಆಕ್ರೋಷ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಬಗ್ಗೆ ಭೋಜೇಗೌಡರು ನೀಡಿರುವ ಹೇಳಿಕೆ ಅವರ ಘನತೆಗೆ ತಕ್ಕುದ್ದಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ಧಿಗಾರರ ಜೊತೆ ಮಾತನಾಡಿದ ಸಚಿವ ಖಾದರ್ ಅವರು, ಕಾಂಗ್ರೆಸ್ ಪಕ್ಷ ದೇಶದ ಸಂವಿಧಾನದ ಆಶಯದಂತೆ ನಡೆದುಕೊಂಡು ಬಂದಿದೆ. ಎಲ್ಲಾ ಜಾತಿ, ಧರ್ಮದ ಜನರನ್ನು ಸಮಾನತೆಯಿಂದ ಕಾಣುತ್ತಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾರನ್ನೂ ಕಡೆಗಣಿಸಿಲ್ಲ ಎಂದು ಭೋಜೆಗೌಡ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ

ನಗರದ ಸರ್ಕ್ಯುಟ್ ಹೌಸ್‌ನಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಭೋಜೆಗೌಡ ಅವರು, ಕಾಂಗ್ರೆಸ್ ಪಕ್ಷವು ಕರಾವಳಿಯಲ್ಲಿ ಹಿಂದೂಗಳನ್ನು ಕಡೆಗಣಿಸಿದ್ದರಿಂದ ದಯನೀಯ ಸೋಲು ಕಂಡಿದೆ.’ಕರಾವಳಿಯಲ್ಲಿ ಕಾಂಗ್ರೆಸ್ ನೆಲಕಚ್ಚಿರುವುದಕ್ಕೆ ಹಿಂದೂಗಳನ್ನು ಕಾಂಗ್ರೆಸ್ ಕಡೆಗಣಿಸಿರುವುದು ಕಾರಣ’ ಎಂದು ಆರೋಪ ಮಾಡಿದ್ದರು.

ಇವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಖಾದರ್ ಅವರು, ಈ ರೀತಿಯ ರಾಜಕೀಯ ಪ್ರೇರಿತ ಹೇಳಿಕೆ ಅವರ ಘನತೆಗ ಕಪ್ಪು ಚುಕ್ಕೆ. ಅವರು ಈ ಜಿಲ್ಲೆಯವರಲ್ಲ ಆ ಕಾರಣದಿಂದ ಈ ಜಿಲ್ಲೆಯ ಬಗ್ಗೆ ಅವರಿಗೆ ಗೊತ್ತಿಲ್ಲ. ಅವರ ಹೇಳಿಕೆಯ ಬಗ್ಗೆ ಅವರ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

Comments are closed.